ಶ್ರೇಯಸ್ಸ್ ಕೆ ಮಂಜು ಅಭಿನಯದ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ನಂದ ಕಿಶೋರ್(ಪೊಗರು) ನಿರ್ದೇಶಿಸುತ್ತಿರುವ ವಿಷಯವನ್ನು ಈ ಹಿಂದೆ ತಿಳಿಸಲಾಗಿತ್ತು.

ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಹೊಸಪೇಟೆ ಬಳಿಯ ಶ್ರೀ ಕ್ಷೇತ್ರ ಹುಲಗಿಯ ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ನೆರವೇರಿತು.ಕೊರೋನ ಹಾವಳಿ ಕಡಿಮೆ ಆದ ಮೇಲೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನಡೆಯಲಿದೆ.

ಪ್ರಸ್ತುತ ಈ ಕೊರೋನ ಸಂದರ್ಭ ದೂರವಾಗಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಮೊದಲ ಹಾಗೆ ಆರಂಭವಾಗಲಿ ಎನ್ನುವುದೇ ಚಿತ್ರತಂಡದ ಆಶಯ. ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು “ಟಗರು” ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು.

ಇದು ಪುರುಷೋತ್ತಮ್ ಅವರು ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Be the first to comment

Leave a Reply

Your email address will not be published. Required fields are marked *

Translate »
error: Content is protected !!