ಶ್ರೇಯಸ್ ಮಂಜು ಹೊಸ ಚಿತ್ರಕ್ಕೆ ಜುಲ್ಲೈ. 7ರಂದು ಮುಹೂರ್ತ

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ನಂದ ಕಿಶೋರ್(ಪೊಗರು) ನಿರ್ದೇಶಿಸುತ್ತಿದ್ದಾರೆ.ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಮುಹೂರ್ತಕ್ಕೂ ಮುನ್ನ ಜುಲೈ 1 ರಂದು ಶೀರ್ಷಿಕೆ ಅನಾವರಣ ಮಾಡಿವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

ಬೆಂಗಳೂರು, ಬೆಳಗಾವಿ, ಹೊಸಪೇಟೆ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ.ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಕರ್ನಾಟಕದ ಅನೇಕ ಊರುಗಳಲ್ಲಿರುವ ಪ್ರತಿಭೆಗಳನ್ನು ಆನ್ ಲೈನ್ ಆಡಿಷನ್ ಮೂಲಕ ಆರಿಸಿಕೊಳಲಾಗಿದೆಯಂತೆ.

ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು “ಟಗರು” ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಇದು ಪುರುಷೋತ್ತಮ್ ಅವರು ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.

ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Be the first to comment

Leave a Reply

Your email address will not be published. Required fields are marked *

Translate »
error: Content is protected !!