ಸೀತೆ ಪಾತ್ರ ಕೈಬಿಟ್ಟಿದ್ದೇಕೆ ಶ್ರೀನಿಧಿ ಶೆಟ್ಟಿ?

ನಿತಿಶ್‌ ತಿವಾರಿ ನಿರ್ದೇಶದನಲ್ಲಿ ಮೂಡಿ ಬರುತ್ತಿರುವ ರಾಮಾಯಣ ಸಿನಿಮಾದಲ್ಲಿ ರಾಕಿಭಾಯ್‌ ಜೊತೆ ಸೀತೆ ಪಾತ್ರ ಕೈಬಿಟ್ಟಿದ್ದೇಕೆ  ಎಂದು ಶ್ರೀನಿಧಿ ಶೆಟ್ಟಿ ರಿವೀಲ್‌ ಮಾಡಿದ್ದಾರೆ.

ಹಿಟ್‌ 3 ಸಿನಿಮಾ ಪ್ರಚಾರದ ವೇಳೆ ಶ್ರೀನಿಧಿ ತಮಗೆ ರಾಮಾಯಣ ಸಿನಿಮಾದಿಂದ ಆಫರ್‌ ಬಂದಿರುವುದಾಗಿ ಹೇಳಿದ್ದಾರೆ. ”ನಾನು ಸ್ಕ್ರೀನ್ ಟೆಸ್ಟ್ ನೀಡಿದ್ದೇನೆ. ಮೂರು ದೃಶ್ಯಗಳನ್ನು ಮಾಡಿ ತೋರಿಸಿದ್ದೆ. ಆ ವೇಳೆ, ಯಶ್ ಕೂಡ ಈ ಸಿನಿಮಾದ ಭಾಗವಾಗ್ತಾರೆ ಎಂದು ಕೇಳಿಪಟ್ಟಿದ್ದೆ. ಅದೇ ಸಮಯದಲ್ಲೇ ‘ಕೆಜಿಎಫ್ 2’ ರಿಲೀಸ್ ಆಗಿತ್ತು. ನನ್ನ ಮತ್ತು ಯಶ್ ಜೋಡಿಗೆ ಮೆಚ್ಚುಗೆ ವ್ಯಕ್ತವಾಗಿತ್ತು.   ಆಗ ನಾನು ಯಶ್‌ ಅವರು ರಾವಣನ ಪಾತ್ರ ನಿರ್ವಹಿಸುತ್ತಾರೆ ಎಂದು ಅಂದುಕೊಂಡಿದ್ದೆ. ಯಶ್ ರಾವಣನಾಗಿ, ನಾನು ಸೀತೆಯಾಗಿ ನಟಿಸಿದ್ರೆ ಅಭಿಮಾನಿಗಳು ಒಪ್ಪಿಕೊಳ್ತಾರೆ ಎಂದೆನಿಸಲಿಲ್ಲ.  ನಮ್ಮ ಜೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದರು. ಹಾಗಾಗಿ ಈ ಸಿನಿಮಾವನ್ನು ಬಿಟ್ಟೆ”  ಎಂದು ಹೇಳಿದ್ದಾರೆ.

ಕೆಜಿಎಫ್‌ ಸರಣಿ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಮಿಂಚಿದ್ದರು. ಆ ಬಳಿಕ ಅವರು ಕನ್ನಡದ ಜೊತೆಗೆ ತೆಲುಗು, ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.  ರೀನಾ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ  ಯಶ್‌ ಗೆ ಜೋಡಿಯಾಗಿ ಅಮೋಘವಾಗಿ ನಟಿಸಿದ್ದರು. ಇವರಿಬ್ಬರ ಜೋಡಿ  ಪ್ರೇಕ್ಷಕರಿಗೂ ಇಷ್ಟವಾಗಿತ್ತು.

ನಿತಿಶ್‌ ತಿವಾರಿ ನಿರ್ದೇಶದನಲ್ಲಿ ಮೂಡಿ ಬರುತ್ತಿರುವ ‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣ್ಬೀರ್‌ ಕಪೂರ್‌, ಸೀತೆಯಾಗಿ ಸಾಯಿಪಲ್ಲವಿ, ಯಶ್‌ ರಾವಣನಾಗಿ ಅಭಿನಯಿಸುತ್ತಿದ್ದಾರೆ.  ಎರಡು ಭಾಗದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಮುಂದಿನ ವರ್ಷದ ದೀಪಾವಳಿಗೆ ಮೊದಲ ಭಾಗ ತೆರೆಗೆ ಬರಲಿದೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!