ಸುಮಲತಾ ಸಹಾಯ ಕೋರಿದ ವಿಜಯಲಕ್ಷ್ಮಿ

ನಟಿ ವಿಜಯಲಕ್ಷ್ಮಿ ಅವರು ತಮ್ಮ ಸಹೋದರಿ ಉಷಾ ಅವರ ಚಿಕಿತ್ಸೆಗೆ ಸಹಾಯ ಮಾಡುವಂತೆ ಸಂಸದೆ ಸುಮಲತಾ ಅವರ ಬಳಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಇದಲ್ಲದೇ ಉಷಾ ಅವರ ಪತಿ, ಖ್ಯಾತ ನಟಿ ಜಯಪ್ರದಾ ಅವರ ಸಹೋದರ ರಾಜ್ ಬಾಬು ಅವರಿಂದ ವಿಚ್ಛೇದನ ಕೊಡಿಸಲು ಅವರು ಕೇಳಿಕೊಂಡಿದ್ದಾರೆ.
ವಿಡಿಯೋದಲ್ಲಿ ವಿಜಯಲಕ್ಷ್ಮಿ ಅವರು, “ಈ ವಿಡಿಯೋವನ್ನು ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ. ಜಯಪ್ರದಾ ಅವರನ್ನು ಸಂಪರ್ಕ ಮಾಡಲು ಸಾಧ್ಯವಾಗುತ್ತಿಲ್ಲ. ಅವರನ್ನು ಸಂಪರ್ಕ ಮಾಡಲು ಯಾರೂ ಬಿಡುತ್ತಿಲ್ಲ. ಸುಮಲತಾ ಅಂಬರೀಶ್ ಅವರನ್ನು ಸಂಪರ್ಕ ಮಾಡಿ ಉಷಾ ಅವರ ಈಗಿನ ಪರಿಸ್ಥಿತಿ ತಿಳಿಸುವ ಜೊತೆಗೆ ಜಯಪ್ರದಾ ಏನೆಲ್ಲ ಹಿಂಸೆ ಕೊಟ್ಟಿದ್ದಾರೆ ಎನ್ನುವುದನ್ನು ತಿಳಿಸಬೇಕು” ಎಂದಿದ್ದಾರೆ.

“ಅಂಬರೀಶ್ ಅವರನ್ನು ಸಂಪರ್ಕ ಮಾಡಲು ನನ್ನ ಬಳಿ ಆಗಲಿಲ್ಲ. ಆದರೆ ಸುಮಲತಾ ಅಂಬರೀಶ್ ಅವರಿಗೆ ಈ ವಿಡಿಯೋ ತಲುಪಿಸಿ. ನಾನು ಸಂಪರ್ಕ ಮಾಡಲು ಪ್ರಯತ್ನ ಪಟ್ಟರೆ ಖಂಡಿತ ಯಾರೂ ಬಿಡುವುದಿಲ್ಲ.ಉಷಾ ಅವರಿಗೆ ನ್ಯಾಯ ಕೊಡಿಸಲು ಅವರಿಂದ ಸಾಧ್ಯವಿದೆ. ಸಹೋದರಿ ಆರೋಗ್ಯ ಹದಗೆಡುತ್ತಿದ್ದು ಪತಿಯಿಂದ ವಿಚ್ಛೇದನ ಕೊಡಿಸಿದರೆ ಚಿಕಿತ್ಸೆಗೆ ಹಣ ಸಿಗುತ್ತೆ” ಎಂದು ವಿಜಯಲಕ್ಷ್ಮಿ ಕೋರಿದ್ದಾರೆ.

“ಮಹಿಳೆಯರಿಗೆ ಧ್ವನಿ ಕೊಡುವೆ ಎಂದು ಹೇಳಿರುವ ಜಯಪ್ರದಾ 15 ವರ್ಷಗಳಿಂದ ನಮ್ಮ ಕುಟುಂಬಕ್ಕೆ ಅನ್ಯಾಯ ಮಾಡಿದ್ದಾರೆ. ಅಕ್ಕನ ಚಿಕಿತ್ಸೆಗೆ ನನ್ನ ಬಳಿ ಹಣವಿಲ್ಲ. ಅಕ್ಕನನ್ನು ನೋಡಿಕೊಳ್ಳಬೇಕಾದ ಕಾರಣ ನನಗೆ ಹೊರಗೆ ದುಡಿಯಲು ಸಾಧ್ಯವಿಲ್ಲ. ಮಗನನ್ನು ನೋಡದೆ ಅಕ್ಕ 15 ವರ್ಷ ಆಗಿದೆ. ಕರ್ನಾಟಕದಲ್ಲಿ ಎಲ್ಲರಿಗೂ ನ್ಯಾಯ ಸಿಕ್ಕಿದೆ. ಉಷಾ ಅವರಿಗೆ ಯಾಕೆ ಹೀಗೆ?” ಎಂದು ಅವರು ಕೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!