ಆಗಸ್ಟ್ 5 ರಿಂದ ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ನಿರಂತರ ಚಿತ್ರೀಕರಣ ನಡೆಯಲಿದೆ.ಈ ಚಿತ್ರವನ್ನು ಡಾ||ಶಾಹಿದ್ ಅವರು ನಿರ್ಮಿಸುತ್ತಿದ್ದಾರೆ. ಕಥೆಯನ್ನು ಶಾಹಿದ್ ಅವರೆ ಬರೆದಿದ್ದಾರೆ. ಲಯಕೋಕಿಲ ಅವರೆ ಸಂಗೀತ ನೀಡುತ್ತಿರುವ ಈ ಚಿತ್ರದ ಹಾಡುಗಳನ್ನು ರಾಮನಾರಾಯಣ್ ಬರೆದಿದ್ದಾರೆ.

ಆನಂದ್ ಛಾಯಾಗ್ರಹಣ ಹಾಗೂ ಮೋಹನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.ರಿಹಾನ್ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.ರಿಹಾನ್ ಅವರಿಗೆ ನಾಯಕಿಯಾಗಿ ಹರ್ಷಿಕಾ ಪೂಣಚ್ಛ ಅಭಿನಯಿಸುತ್ತಿದ್ದಾರೆ.

ನಾಯಕನ ತಾಯಿಯ ಪಾತ್ರದಲ್ಲಿ ಸುಮಾಶಾಸ್ತ್ರಿ ಕಾಣಿಸಿಕೊಳ್ಳುತ್ತಿದ್ದಾರೆ.
ಲಯಕೋಕಿಲ, ಡಾ||ಶಾಹಿದ್, ಶೋಭ್ ರಾಜ್, ಕಲೀಲ್, ಮಿಮಿಕ್ರಿ ಮಂಜು, ಕಾರ್ತಿಕ್ ಶರ್ಮ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.”ತಾಯ್ತ” ಎಲ್ಲಾ ತರಹದ ಮಾಮೂಲಿ ಕಥೆಯಲ್ಲ.. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎನ್ನುತ್ತಾರೆ ಲಯಕೋಕಿಲ.