Umapathi: ಬಿಡಿಎ ಸೈಟ್ ಒತ್ತುವರಿ ಆರೋಪದಲ್ಲಿ ಪ್ರೊಡ್ಯೂಸರ್

ಬೆಂಗಳೂರಿನ ಎಚ್​​ಎಸ್​​ಆರ್ ಲೇ ಔಟ್​ನ 3ನೇ ಸೆಕ್ಟರ್​​ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಶ್ರೀನಿವಾಸ್​​ಗೌಡ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಒತ್ತುವರಿ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ‘ಈ ಒತ್ತುವರಿಯನ್ನು ಏಕೆ ತೆರವು ಮಾಡಬಾರದು’ ಎಂದು ಬಿಡಿಎ ವತಿಯಿಂದ ನೋಟೀಸ್ ನೀಡಲಾಗಿದೆ.

8 ದಿನಗಳ ಒಳಗೆ ಈ ನೋಟಿಸ್​ಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ.

ಉಮಾಪತಿ ಅವರು ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ಶ್ರೀಮುರಳಿ ಹಾಗೂ ಆಶಿಕಾ ರಂಗನಾಥ್ ‘ಮದಗಜ’ ಚಿತ್ರವನ್ನು ನಿರ್ಮಾಣ ಮಾಡಿದ್ದರು.

ಉಮಾಪತಿ ದರ್ಶನ್ ನಟನೆಯ ರಾಬರ್ಟ್ ಚಿತ್ರವನ್ನು ಸಹ ನಿರ್ಮಾಣ ಮಾಡಿದ್ದರು. ಬಳಿಕ ದರ್ಶನ್ ಹಾಗೂ ಉಮಾಪತಿ ನಡುವೆ ಚೆಕ್ ವ್ಯವಹಾರ ಸಂಬಂಧ ಮನಸ್ತಾಪ ಉಂಟಾಗಿ ದೊಡ್ಡ ವಿವಾದ ಉಂಟಾಗಿತ್ತು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!