ಯುಪಿ ಸಿಎಂ ಫೋಟೋ ಬಳಕೆ: ದೂರು

‘ಪಠಾಣ್’ ಸಿನಿಮಾದಲ್ಲಿ ಶಾರುಖ್​ ಖಾನ್ ಅವರು​ ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್​ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ ಹಂಚಿಕೊಂಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾಗಿದೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ. ಚಿತ್ರದ ಪೋಸ್ಟರ್‌ಗಳಲ್ಲಿ ಸಿಎಂ ಯೋಗಿ ಅವರ ಫೋಟೋ ಹಾಕಿದ್ದಕ್ಕಾಗಿ ಹೆಡ್ ಕಾನ್‌ಸ್ಟೇಬಲ್ ನೀಡಿದ ದೂರು ಆಧರಿಸಿ ಲಖನೌನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಡಿಜಿಪಿ ಕೇಂದ್ರ ಕಚೇರಿಯ ಸೈಬರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇತ್ತೀಚೆಗಷ್ಟೇ ಶಾರುಖ್​ ಖಾನ್​ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್​ ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿದ್ದು, ಹಾಡು ಬಿಡುಗಡೆಯ ಬೆನ್ನಲ್ಲೇ ವಿವಾದಕ್ಕೆ ಸಿಲುಕಿಕೊಂಡಿದೆ.

ದೀಪಿಕಾ ಧರಿಸಿದ ಕೇಸರಿ ಬಿಕಿನಿ ವಿವಾದ ಸೃಷ್ಟಿ ಮಾಡಿದೆ.

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!