Kabzaa: ಕಬ್ಜ 2 ಬಗ್ಗೆ ಉಪೇಂದ್ರ ಸುಳಿವು

ಉಪೇಂದ್ರ ಅವರು ಕಬ್ಜ 2 ಸಿನಿಮಾ ನಿರ್ಮಾಣದ ಬಗ್ಗೆ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಬ್ಜ 2 ಸಿನಿಮಾದಲ್ಲಿ ನನಗೆ ಅತಿಥಿ ಪಾತ್ರ ಕೊಡಿ. ಸುದೀಪ್ ಅವರನ್ನು ಹೀರೋ ಆಗಿ ಮಾಡಿ ಎಂದು ನಿರ್ದೇಶಕರಲ್ಲಿ ಮನವಿ ಮಾಡಿದರು.

‘ಕಬ್ಜ ಇದು ನಟರ ಸಿನಿಮಾವಲ್ಲ. ಟೆಕ್ನಿಷಿಯನ್ಸ್ ಸಿನಿಮಾ. ಈ ಸಿನಿಮಾದಲ್ಲಿ ನಿರ್ದೇಶಕರು, ಸಂಗೀತ ನಿರ್ದೇಶಕರ, ಕಲಾ ನಿರ್ದೇಶಕ, ಸಿನಿಮಾಟೋಗ್ರಾಫರ್ ಕಾಣುತ್ತಾರೆ. ನಟರು ಕೇವಲ ಹಿಂದಿನ ಶಕ್ತಿ ಅಷ್ಟೇ. ಇಂತಹ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ. ಕಬ್ಜ 2 ಸಿನಿಮಾ ಕೂಡ ಆಗಲಿ. ಆ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರ ಮಾಡಲಿ’ ಎಂದು ಕೋರಿದರು.

ಪ್ರಿ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿದ್ದ ಡಾಲಿ ಧನಂಜಯ್, ‘ಕಬ್ಜ ಸಿನಿಮಾದಲ್ಲಿ ನನಗೆ ಅವಕಾಶ ನೀಡಿಲ್ಲ. ನಿರ್ದೇಶಕರು ಬಹುಶಃ ನನ್ನನ್ನು ಮರೆತಿದ್ದಾರೆ. ಕಬ್ಜ 2 ನಲ್ಲಾದರೂ ಅವಕಾಶ ಕೊಡಲಿ. ಮೊದಲ ಶೋ ರಾತ್ರಿಯೇ ಇರಲಿ, ಬೆಳಗ್ಗೆ ಆಯೋಜನೆ ಆಗಿರಲಿ ಒಬ್ಬ ಅಭಿಮಾನಿಯಾಗಿ ಬಂದು ಥಿಯೇಟರ್ ನಲ್ಲಿ ಸಂಭ್ರಮಿಸುತ್ತೇನೆ’ ಎಂದರು.

ನಿರ್ದೇಶಕ ಆರ್.ಚಂದ್ರು ಅವರನ್ನು ಹೊಗಳಿದ ಕಿಚ್ಚ ಸುದೀಪ್, ‘ಇಂಥದ್ದೊಂದು ಸಿನಿಮಾದಲ್ಲಿ ನಾನು ಭಾಗಿಯಾಗಿದ್ದೇನೆ ಎನ್ನುವುದು ಸಂತಸ ತಂದಿದೆ. ನಿರ್ದೇಶಕರು ಸಿನಿಮಾವನ್ನು ತುಂಬಾ ಚೆನ್ನಾಗಿ ಮಾಡಿದ್ದಾರೆ. ಪ್ರೇಕ್ಷಕರು ಕೂಡ ಅಷ್ಟೇ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೆನಪಿರಲಿ ಪ್ರೇಮ್, ನಟಿ ಶ್ರಿಯಾ ಸರಣ್, ತಾನ್ಯ ಹೋಪ್, ಚಕ್ರವರ್ತಿ ಚಂದ್ರಚೂಡ, ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್, ಜಾಕ್ ಮಂಜು, ಸುದೀಪ್ ಪುತ್ರಿ ಶಾನ್ವಿ ಸೇರಿದಂತೆ ಹಲವಾರು ಸಿಲೆಬ್ರಿಟಿಗಳು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಸಿನಿಮಾದ ಹಾಡು ಮತ್ತು ಟ್ರೈಲರ್ ತೋರಿಸಲಾಯಿತು. ಚಿತ್ರ ಮಾ.17ಕ್ಕೆ ರಿಲೀಸ್ ಆಗಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!