ವೆಂಕಟೇಶಾಯ ನಮಃ

‘ವೆಂಕಟೇಶಾಯ ನಮಃ’ ಚಿತ್ರೀಕರಣ‌ ಮುಕ್ತಾಯ

ಹುಡುಗಿ ಕೈ ಕೊಟ್ಟಾಗ ಲೈಫ್ ನ ಚಾಲೆಂಜ್ ಆಗಿ ತಗೊಂಡು ಲವ್ ಮಾಡದೆ, ಹುಡುಗೀರ ಜೊತೆ ಚೆಲ್ಲಾಟವಾಡುತ್ತಾ , ಎಂಜಾಯ್ ಮಾಡಬೇಕೆಂಬ ವೆಂಕಿ ಅಲಿಯಾಸ್ ವೆಂಕಟೇಶನಿಗೆ ಮತ್ತೆ ಲೈಫ್ ನಲ್ಲಿ ಲವ್ ಆಗುತ್ತಾ ಎಂಬುದೇ ಕಥಾಹಂದರ. .. ಕಥೆಯನ್ನು ಹಾಸ್ಯ ಮಿಶ್ರಣದೊಂದಿಗೆ ಸಂಪೂರ್ಣ ಮನರಂಜನೆಯ ಜೊತೆ ನೀಡುತ್ತೇವೆ. ಒಟ್ಟಿನಲ್ಲಿ ಆ ವೆಂಕಟೇಶ್ವರನ ಆಶೀರ್ವಾದ ಮತ್ತು ಜನಗಳ ಪ್ರೋತ್ಸಾಹ ವಿರಲಿ ಎನುತ್ತಾರೆ ಹರೀಶ್ ರಾಜ್.

ಈ ಚಿತ್ರದ ನಿರ್ಮಾಪಕ ಪಿ. ಜನಾರ್ದನ , ನಿರ್ದೇಶಕರು ಈ ಕಾಮಿಡಿ ಸಬ್ಜೆಕ್ಟ್ ಹೇಳಿದ್ರು, ನಮಗೆ ಬಹಳ ಇಷ್ಟವಾಗಿ ಚಿತ್ರವನ್ನ ಆರಂಭಿಸಿದ್ದೆವು ಇದೀಗ ಚಿತ್ರೀಕರಣ ಮುಗಿದಿದೆ. ನಮಗೆ ಎಲ್ಲರೂ ಸಪೋರ್ಟ್ ಮಾಡಿ ಎಂದು ಕೇಳಿಕೊಂಡರು.

ವೆಂಕಟೇಶಾಯ ನಮಃ

ಇದರಲ್ಲಿ ನಾಯಕ ಹರೀಶ್ ರಾಜ್ ಸಾಫ್ಟ್ವೇರ್ ಉದ್ಯೋಗಿ ಪಾತ್ರವನ್ನು ನಿರ್ವಹಿಸುತ್ತಿದ್ದಾರ, ತಾಯಿಯ ಪಾತ್ರದಲ್ಲಿ ಹಿರಿಯ ನಟಿ ಉಮಾಶ್ರೀ ರವರು ಅಭಿನಯಿಸುತ್ತಿದ್ದಾರೆ. ಈ ಚಿತ್ರದ ನಾಯಕಿಯಾಗಿ ಪ್ರಕೃತಿ ಪ್ರಸಾದ್ ನಟಿಸಿದ್ದಾರೆ . ದೊಡ್ಡ ತಾರಾ ಬಳಗವೇ ಹೊಂದಿದೆ.

ಹಿರಿಯ ನಟ ಅಶೋಕ್, ಉಮೇಶಣ್ಣ, ತಬಲಾ ನಾಣಿ, ನಾಯಕಿಯ ತಾಯಿಯಾಗಿ ಚಿತ್ಕಲ ಬಿರಾದರ್ , ರಾಘು ರಾಮನ ಕೊಪ್ಪ , ಸೇರಿದಂತೆ ಹಲವಾರು ಕಲಾವಿದರಿದ್ದಾರೆ.

ವೆಂಕಟೇಶಾಯ ನಮಃ

ಶ್ರೀ ಲಕ್ಷ್ಮಿ ಜನಾರ್ದನ ಮೂವೀಸ್ ಮೂಲಕ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಮುಗಿದಿದ್ದು , ಈ ಚಿತ್ರಕ್ಕೆ ಶಿವಶಂಕರ್ ಛಾಯಾಗ್ರಾಹಣ , ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ , ಪ್ರಮೋದ್ ಮರುವಂತೆ , ಚೇತನ್ ಕುಮಾರ್, ಗೌವ್ಸ್ ಪೀರ್ ಸಾಹಿತ್ಯ , ಜೀವನ್ ಪ್ರಕಾಶ್ ಸಂಕಲನ , ವಿನಯ್. ಜಿ. ಆಲೂರ್ ಡಿ.ಐ, ಮಿತೇಶ್, ಸಂತೋಷ್. ಸಿ.ಎಂ ಸಹ ನಿರ್ದೇಶನವಿದೆ. ಮುರಳಿ ಮಾಸ್ಟರ್ dance ಚೋರೆಗ್ರಾಫರ್, ಮೂರು ಹಾಡುಗಳಿವೆ, ಎರಡು ಫೈಟ್ ಗಳಿವೆ.

ವೆಂಕಟೇಶಾಯ ನಮಃ

Be the first to comment

Leave a Reply

Your email address will not be published. Required fields are marked *

Translate »
error: Content is protected !!