‘ಯಾಕೆ’ ಶೀರ್ಷಿಕೆ ಬಿಡುಗಡೆ

ಸಮಾನ ಮನಸ್ಕರ ತಂಡ ಸೇರಿಕೊಂಡು ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ಧವಾಗುತ್ತಿರುವ ಯುವ ನಿರ್ದೇಶಕ ಪ್ರೇಮ್ ನಿರ್ದೇಶನದ ಚಿತ್ರದ ಶೀರ್ಷಿಕೆ ಬಿಡುಗಡೆ  ಆಗಿದೆ.

ಚಾಮರಾಜಪೇಟೆಯ ಕಲಾವಿದರ ಭವನದಲ್ಲಿ ಶ್ರೀನಗರ ಕಿಟ್ಟಿ ಚಿತ್ರದ ಕನ್ನಡ ಹಾಗೂ ತೆಲುಗು ಟೈಟಲ್ ಅನ್ನ ಬಿಡುಗಡೆ ಮಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಒರಟ ಪ್ರಶಾಂತ್ ಸಿರಿ ಸಿನಿಮಾಸ್ ಸಂಸ್ಥೆಯ ಲೋಗೋ ಲಾಂಚ್ ಮಾಡಿದರು. ನಿರ್ಮಾಪಕ ಟಿ.ಪಿ. ಸಿದ್ದರಾಜ್, ಕಲಾವಿದೆ ಅಂಬುಜಾ ಸಿದ್ದರಾಜ್ ಸೇರಿದಂತೆ ಹಲವು ಗಣ್ಯರು  ಕಾರ್ಯಕ್ರಮದಲ್ಲಿ ಹಾಜರಿದ್ದು ತಂಡಕ್ಕೆ ಶುಭ  ಹಾರೈಸಿದರು.

ಕನ್ನಡದಲ್ಲಿ ‘ಯಾಕೆ’ ಎನ್ನುವ ಶೀರ್ಷಿಕೆ ಇಟ್ಟಿದ್ದು ತೆಲುಗಿನಲ್ಲಿ ‘ಸಂಸ್ಥಾನಂ’ ಎಂದು ಹೆಸರು ಇಡಲಾಗಿದೆ. ಎರಡು ಭಾಷೆಯಲ್ಲಿ ಸೀತಾ ಹರ್ಷವರ್ಧನ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ನಿರ್ಮಾಪಕಿ ಸೀತಾ ಹರ್ಷವರ್ಧನ್ ಮಾತನಾಡಿ, ನಾನು ರಂಗಭೂಮಿ ಕಲಾವಿದೆ. ಕನ್ನಡದ ಹಲವು ಚಿತ್ರಗಳು ಮತ್ತು ಧಾರಾವಾಹಿಯಲ್ಲಿ ನಟಿಸಿದ್ದೇನೆ. ನಿರ್ದೇಶಕ ಪ್ರೇಮ್ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ಚಿತ್ರವನ್ನು ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಮುಂದಿನ ವರ್ಷ ಏಪ್ರಿಲ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಉದ್ದೇಶ ಹಾಕಿಕೊಳ್ಳಲಾಗಿದೆ. ನಮ್ಮ ಪ್ರಯತ್ನಕ್ಕೆ ಅಮೆಜಾನ್ ಮತ್ತು ಹೈದರಾಬಾದಿನ ಖುಷಿ ಸಿನಿಮಾ ಸಂಸ್ಥೆ ಜೊತೆಗೂಡಿದೆ. ಇದರಿಂದಾಗಿ ಚಿತ್ರ ನಿರ್ಮಾಣಕ್ಕೆ ಮತ್ತಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುವ ಉದ್ದೇಶವಿದೆ’ ಎಂದು ಹೇಳಿದರು.

ನಿರ್ದೇಶಕ ಪ್ರೇಮ್ ಮಾತನಾಡಿ, ನ 2007ರಲ್ಲಿ ನಿರ್ದೇಶಕ ಪಿ.ಎನ್. ಸತ್ಯ ಬಳಿ ಸಹಾಯಕನಾಗಿ ಕೆಲಸಕ್ಕೆ ಸೇರಿದೆ. ಉಪೇಂದ್ರ ಜೊತೆ ಹೋಂ ಮಿನಿಸ್ಟರ್ ಚಿತ್ರದಲ್ಲೂ ಕೆಲಸ ಮಾಡಿದ ಅನುಭವವಿದೆ.  ಈಗ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬರುತ್ತಿದ್ದೇನೆ. ಮೈತಲಾಜಿಕಲ್ ಜೊತೆ ಸಸ್ಪೆನ್ಸ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ’ ಎಂದರು.

‘ಯಾಕೆ’ ಚಿತ್ರದ ನಾಯಕ ಉತ್ತಮ್, ನಾಯಕಿಯಾಗಿ ಅಮಿತಾ ರಂಗನಾಥ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ರುದ್ರಮುನಿ ಛಾಯಾಗ್ರಹಣ ಮಾಡುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!