ಉದಯ ಟಿವಿಯ ಹೊಸ ಧಾರಾವಾಹಿ “ಯಾರಿವಳು”

ನಂದಿನಿ, ಮನಸಾರೆ, ಕಾವ್ಯಾಂಜಲಿ, ಆಕೃತಿ, ಕಸ್ತೂರಿ ನಿವಾಸದಂತಹ ಕೂತೂಹಲಕಾರಿ ಕಥೆಗಳನ್ನು ನೀಡಿದ ವಾಹಿನಿಯ ಹೆಗ್ಗಳಿಕೆ ಹೆಚ್ಚಿಸಲು‘ಯಾರಿವಳು’ ಹೆಸರಿನ ಹೊಸ ಧಾರಾವಾಹಿಯು ವೀಕ್ಷಕರ ಮನೆ ಬಾಗಿಲಿಗೆ ಬರಲಿದೆ. ಯಾರಿವಳು ಆಗಷ್ಟ್ 31 ರಿಂದ ಸೋಮವಾರದಿಂದ ಶುಕ್ರವಾರದವರಗೆ ರಾತ್ರಿ 8ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

“ಬದಲಾಗ್ತಿದೆ ಸಮಯ ಬದಲಾಗ್ತಿದೆ ಉದಯ” ಟ್ಯಾಗ್ ಲೈನ್ ಗೆ ಅನುಗುಣವಾಗಿ ʼಯಾರಿವಳುʼ ಕಥೆಯು ಹಿಂದೆಂದಿಗಿಂತ ಹೊಸರೂಪದಲ್ಲಿ ಅದ್ದೂರಿಯಾಗಿ ಕಿರುತರೆಗೆ ಪಾದಾರ್ಪಣೆ ಆಗಲಿದೆ. ಬೆಳ್ಳಿತೆರೆಯμÉ್ಟೀ ಅತ್ಯುತ್ತಮ ಗುಣಮಟ್ಟದ ಕಥೆ, ಚಿತ್ರಕಥೆ, ಮೇಕಿಂಗ್ ಹಾಗೂ ತಾರಾಬಳಗವನ್ನು ಕಥೆ ಒಳಗೊಂಡಿದೆ.

ಶ್ರೀಮಂತ ಮನೆತನಕ್ಕೆ ಸೇರಿದ ಶ್ರೇಷ್ಟ ಸ್ವಂತ ಅಪ್ಪ ಅಮ್ಮನ ಪ್ರೀತಿ ವಂಚಿತ ಮಗು. ಅಪ್ಪ ಪ್ರೀತಿ ತೋರದಿರಲು ಸ್ವಂತ ಮಗಳ ಹೆಸರಲ್ಲಿರುವ ಆಸ್ತಿ. ಇನ್ನು ಸ್ವಂತ ಅಮ್ಮನನ್ನು ಕಾಣೆಯಾಗಿಸಿ ಹೊಸ ಅಮ್ಮನನ್ನು ಇವಳೇ ನಿಮ್ಮಮ್ಮ ಎಂದು ನಂಬಿಸುತ್ತಿರುವ ಅಪ್ಪ.

ಈ ಇಬ್ಬರ ಹಿಂಸೆಗೆ ಮೂಲೆ ಗುಂಪಾದವರಲ್ಲಿ ಶ್ರೇಷ್ಟಳ ಅಜ್ಜ ದೇವರಾಯ ಕೂಡ. ಶ್ರೇಷ್ಟಳ ಕಷ್ಟಕ್ಕೆ ಬೆನ್ನೆಲುಬಾಗಿ ಮಂಗಳಮುಖಿಯೊಬ್ಬಳು ಈ ಕಥೆಯಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವುದು ವಿಶೇಷ. ಈ ವಿಶೇಷ ಪಾತ್ರದ ಜೊತೆಗೆ ಪೋಷಕ ಪಾತ್ರಗಳಿಗೆ ತಂಡವು ಮಂಗಳಮುಖಿ ಸಮುದಾಯದ ಸದಸ್ಯರನ್ನೇ ಆಯ್ಕೆ ಮಾಡಿಕೊಂಡಿರುವುದು ಈ ಧಾರಾವಾಹಿಯ ಹೆಗ್ಗಳಿಕೆಯಾಗಿದೆ.

ಇದೆಲ್ಲ ಒಂದೆಡೆಯಾದ್ರೆ ಮತ್ತೊಂದೆಡೆ ನಮ್ಮ ಕಥಾನಾಯಕಿ ಮಾಯಾ, ಆಂಜನೇಯನ ಪರಮ ಭಕ್ತೆ. ಏಲ್ಲ ಕೆಲಸದಲ್ಲೂ ಭಜರಂಗಿಯನ್ನು ನೆನಯುವ ಇವಳು ಭಂಡ ಧೈರ್ಯದಿಂದ ಮುನ್ನುಗ್ಗುವ ಸ್ವಭಾವದವಳು. ಇವಳು ಮತ್ತು ಮಗು ಶ್ರೇಷ್ಟಳ ಸ್ವಂತ ಅಮ್ಮ ಅಹಲ್ಯ ನೋಡಲು ಒಂದೇ ತರ ಇದ್ದು, ಇವರಿಬ್ಬರಿಗಿರುವ ಅವಿನಾಭಾವ ಸಂಬಂಧವನ್ನು ಕಥೆಯಲ್ಲಿ ಹೆಣೆಯಲಾಗಿದೆ. ಅಹಲ್ಯ ತರ ಇರುವ ಮಾಯಾ ಯಾರು? ಮಾಯಾ ಹಿಂದಿನ ಕಥೆಯೇನು? ಯಾರಿವಳು ಎಂಬ ಶೀರ್ಷಿಕೆಗೆ ಉತ್ತರ ಈ ಕಥೆಯಲ್ಲಡಗಿದೆ.

ಬಾಹುಬಲಿ ಸರಣಿ ಚಿತ್ರಗಳನ್ನು ಹಾಗೂ ಬಾಲಿವುಡ್ ಕ್ಷೇತ್ರದಲ್ಲಿ ಜನಪ್ರಿಯ ಹೈ ಬಜೆಟ್ ಧಾರಾವಾಹಿಗಳನ್ನು ಕೊಟ್ಟ ನಿರ್ಮಾಣ ಸಂಸ್ಥೆ ಅರ್ಕಾ ಮೀಡಿಯಾ ಧಾರಾವಾಹಿಯನ್ನು ನಿರ್ಮಿಸುತ್ತಿದ್ದು ದರ್ಶಿತ್ ಭಟ್ ನಿರ್ದೇಶಿಸುತ್ತಿದ್ದಾರೆ. ಮಂಡ್ಯ ಮಂಜು ಅವರ ಛಾಯಾಗ್ರಹಣವಿದೆ.

ಕಥಾನಾಯಕಿಯಾಗಿ ಬ್ಯೂಟಿಫುಲ್ ಮನಸುಗಳು, ಕಮರೊಟ್ಟು ಚೆಕ್‍ಪೋಸ್ಟ್, ವೆನಿಲ್ಲಾ, ಕಟ್ಟುಕಥೆ ಸಿನಿಮಾಗಳಲ್ಲಿ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ ಸ್ವಾತಿ ಕೊಂಡೆ ಮಾಯಾ ಪಾತ್ರವನ್ನು, ಕಥಾ ನಾಯಕ ನಿಖಿಲ್ ಪಾತ್ರವನ್ನು ನಂದಿನಿ ಧಾರಾವಾಹಿ ಖ್ಯಾತಿಯ ಆರವ್ ಸೂರ್ಯ ನಿರ್ವಹಿಸುತ್ತಿದ್ದು ಶ್ರೇಷ್ಟ ಪಾತ್ರವನ್ನು ಜಂಟಲ್ ಮ್ಯಾನ್ ಸಿನೇಮಾ ಖ್ಯಾತಿಯ ಬಾಲ ನಟಿ ಆರಾಧ್ಯ ನಿರ್ವಹಿಸುತ್ತಿದ್ದಾರೆ.

ಕಥೆಯ ಖಳ ಪಾತ್ರಗಳನ್ನು ಅಂಬರೀಶ್ ಸಾರಂಗಿ ಹಾಗೂ ಶರ್ಮಿತಾ ನಿರ್ವಹಿಸುತ್ತಿದ್ದು, ಮುಖ್ಯ ಭೂಮಿಕೆಯಲ್ಲಿ ಹಿರಿಯಕಲಾವಿದ ಅಶೋಕ ಹೆಗಡೆ, ಬಾಲರಾಜ್, ವಾಣಿಶ್ರೀ, ದೀಪಾ ಪಾರ್ವತಿ, ನಾಗರಾಜ್ ಭಟ್, ಮಂಗಳಮುಖಿ ಪಾತ್ರಧಾರಿಗಳಾಗಿ ಸನಾ ಸುಮನ್ ಹಾಗೂ ಲೋಹಿತ್ ಪಟೇಲ್ ಇದ್ದಾರೆ.

ಇದೇ ಆಗಸ್ಟ್ 31ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8ಕ್ಕೆ ಉದಯ ಟಿವಿಯಲ್ಲಿ “ಯಾರಿವಳು” ಪ್ರಾರಂಭವಾಗಲಿದೆ.

This Article Has 2 Comments
  1. Pingback: Tree removal Lilesville

  2. Pingback: binance cc

Leave a Reply

Your email address will not be published. Required fields are marked *

Translate »
error: Content is protected !!