ಹೊಸ ಸಿನೆಮಾ ತಯಾರಿಯಲ್ಲಿ ಯೋಗರಾಜ್ ಭಟ್

ಯೋಗರಾಜ್ ಭಟ್ ಅವರು ಹೊಸ ಸಿನಿಮಾದ ತಯಾರಿಯಲ್ಲಿ ಇದ್ದು ಖ್ಯಾತನಾಮರು ಚಿತ್ರದಲ್ಲಿ ಒಗ್ಗೂಡಿರುವುದು ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಜೊತೆ ಯೋಗರಾಜ್ ಭಟ್ ನೇತೃತ್ವದ ತಂಡ ಇರುವ ಚಿತ್ರವನ್ನು ಯೋಗರಾಜ್ ಭಟ್ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
“ಸೂರಿ, ಹರಿಕೃಷ್ಣ, ವಿಕಾಸ್, ಸುಧೀರ್ ಅವರನ್ನು ಒಳಗೊಂಡ ಒಂದು ಅದ್ಭುತ ಸಿನಿಮಾ ಲೈನ್ ಅಪ್ ಆಯ್ತು. ಸ್ನೇಹಿತರೆಲ್ಲರ ಮುದ್ದಾಟ, ಗುದ್ದಾಟ ಹಾಗೂ ಸಪೋರ್ಟ್ ಜೊತೆ ನಿರ್ದೇಶನ ನನ್ನದು. ನಟವರ್ಗ ಅದ್ಭುತ ಆದ್ರೆ ಇವತ್ತು ಹೇಳಂಗಿಲ್ಲ. ಶೀಘ್ರದಲ್ಲೇ ಬಾಕಿ ಸುದ್ದಿ” ಎಂದು ಯೋಗರಾಜ್ ಭಟ್ ಹೇಳಿಕೊಂಡಿದ್ದು ಕುತೂಹಲ ಮೂಡಿಸಿದ್ದಾರೆ.
ನಂಬಲರ್ಹ ಮೂಲಗಳ ಪ್ರಕಾರ ಬಿಸಿ ಪಾಟೀಲ್ ಅವರ ಸಂಸ್ಥೆಯಿಂದ ಅವರ ಮಗಳು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

‘ಪಂಚತಂತ್ರ’ ಚಿತ್ರದ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಯೋಗರಾಜ್ ಭಟ್ ‘ಗಾಳಿಪಟ 2 ‘ಸಿನಿಮಾ ಮಾಡುತ್ತಿದ್ದಾರೆ. ಹೊಸ ಚಿತ್ರದಲ್ಲಿ ಯೋಗರಾಜ್ ಭಟ್ ಜೊತೆಗೆ ಸೂರಿ ಜತೆಗೂಡಿರುವುದು ಸಾಕಷ್ಟು ನಿರೀಕ್ಷೆ ಮೂಡಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!