ಜೀ಼ ಕನ್ನಡದಲ್ಲಿ ಶಂಕ್ರಣ್ಣನ “ಮಾಲ್ಗುಡಿ ಡೇಸ್”

ಚಲನಚಿತ್ರಗಳು, ಧಾರಾವಾಹಿಗಳು ಗೇಮ್ಶೋಗಳು, ಟಾಕ್ ಶೋಗಳು ಮತ್ತು ಪ್ರಚಲಿತ ವಿದ್ಯಮಾನಗಳ ಕಾರ್ಯಕ್ರಮಗಳಿಂದ ಈ ಚಾನೆಲ್ ಬಹು ಪ್ರಕಾರಗಳ ಕೊಡುಗೆಗಳನ್ನು ನೀಡುತ್ತಿದೆ ಮತ್ತು ಮನರಂಜನೆಯ ಪ್ರಮುಖ ತಾಣವಾಗಿ ಅಪಾರ ಮೆಚ್ಚುಗೆ ಪಡೆದಿದೆ.

ಜೀ಼ ಕನ್ನಡ ಹಲವು ಬ್ಲಾಕ್ಬಸ್ಟರ್ ಕಾರ್ಯಕ್ರಮಗಳಾದ ವೀಕೆಂಡ್ ವಿಥ್ ರಮೇಶ್, ಸ ರೆ ಗ ಮ ಪ, ಮತ್ತು ಡ್ರಾಮಾ ಜೂನಿಯರ್ಸ್ ಮುಂತಾದವುಗಳನ್ನು ಸೃಷ್ಟಿಸಿದ್ದು ಎಲ್ಲ ವಯೋಮಾನದ ವೀಕ್ಷಕರಿಗೂ ಇಷ್ಟವಾಗುತ್ತವೆ. ಕಂಟೆಂಟ್ ಮತ್ತು ಕಾರ್ಯಕ್ರಮದ ಆಯ್ಕೆಯ ಸಮತೋಲಿತ ಮಿಶ್ರಣವಾದ ಜೀ಼ ಕನ್ನಡ ಕರ್ನಾಟಕದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಿಇಸಿಗಳಲ್ಲಿ ಒಂದಾಗಿದೆ.

ಜೀ಼ ಕನ್ನಡ ಎಲ್ಲ ಕೇಬಲ್ ಮತ್ತು ಡಿಜಿಟಲ್ ಪ್ಲಾಟ್ಫಾರಂಗಳಲ್ಲಿ ಉತ್ತಮ ಸಂಪರ್ಕ ಹೊಂದಿದೆ. ಈ ಚಾನೆಲ್ ಜೀ಼ಲ್ ಡಿಜಿಟಲ್ ಮತ್ತು ಮೊಬೈಲ್ ಮನರಂಜನೆಯ ಪ್ಲಾಟ್ಫಾರಂ ಜೀ಼5ನಲ್ಲಿ ಕೂಡಾ ಲಭ್ಯವಿದ್ದು ನೀವು ನಿಮ್ಮ ಅಚ್ಚುಮೆಚ್ಚಿನ ಜೀ಼ ಕನ್ನಡ ಶೋಗಳನ್ನು ತಪ್ಪಿಸಿಕೊಳ್ಳದಂತೆ ದೃಢಪಡಿಸುತ್ತದೆ.

ಜೀ಼ ಪ್ರೈಮ್ ಪ್ಯಾಕ್ ಆಯ್ಕೆ ಮಾಡಿಕೊಳ್ಳಿ, ಅದರಲ್ಲಿ ಜೀ಼ ಕನ್ನಡ ಮತ್ತು ಜೀ಼ ಪಿಚ್ಚರ್ ಕೇವಲ 19 ರೂ.ಗಳಲ್ಲಿ ನಿಮ್ಮ ಇಡೀ ಕುಟುಂಬದ ದೈನಂದಿನ ಮನರಂಜನೆಯ ಅಗತ್ಯಗಳನ್ನು ಪೂರೈಸುತ್ತದೆ. ಮತ್ತಷ್ಟು ವಿವರಗಳಿಗೆ ದಯವಿಟ್ಟು ನಿಮ್ಮ ಡಿಟಿಎಚ್ ಅಥವಾ ಕೇಬಲ್ ಆಪರೇಟರ್ ಸಂಪರ್ಕಿಸಿ.

ಆರ್ ಕೆ ನಾರಾಯಣ್ ಅವರ ಬರಹಗಳ ಆಧಾರಿತ ‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು 1986ರಲ್ಲಿ ಖ್ಯಾತ ನಿರ್ದೇಶಕ, ನಟ ಶಂಕರ್ ನಾಗ್ ದೂರದರ್ಶನಕ್ಕಾಗಿ ನಿರ್ದೇಶಿಸಿದ್ದರು. ಆ ಕಾಲದಲ್ಲಿ ಮಾಲ್ಗುಡಿ ಡೇಸ್ ಅಪಾರ ಜನಮನ್ನಣೆ ಗಳಿಸಿತ್ತು.

ರಾಷ್ಟ್ರೀಯ ಚಾನೆಲ್ ನಲ್ಲಿ ಕನ್ನಡಿಗರು ರೂಪಿಸಿದ ಯಶಸ್ವಿ ಧಾರಾವಾಹಿ, ದಿ.ಶಂಕರ್ ನಾಗ್ ನಿರ್ದೇಶನದ `ಮಾಲ್ಗುಡಿ ಡೇಸ್’ಜೀ಼ ಕನ್ನಡ ವಾಹಿನಿಯಲ್ಲಿ ಮೇ 11ರಿಂದ ಕನ್ನಡ ಭಾಷೆಯಲ್ಲಿ ಪ್ರಸಾರವಾಗಲಿದೆ.

ಮೇ 11ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದ್ದು ಇದು ಕನ್ನಡ ಕಿರುತೆರೆಯಲ್ಲಿಯೇ ಪ್ರಪ್ರಥಮ ಪ್ರಯತ್ನವಾಗಿದೆ. ವಿಶ್ವವಿಖ್ಯಾತ ಲೇಖಕ ಆರ್.ಕೆ.ನಾರಾಯಣ್ ಅವರ ಮಾಲ್ಗುಡಿ ಡೇಸ್ ಅವರ ಜನಪ್ರಿಯ ಕಥಾಗುಚ್ಛವಾಗಿದೆ. ಮಾಲ್ಗುಡಿ ಎಂಬ ಕಲ್ಪಿತ ಊರಿನಲ್ಲಿ ನಡೆಯುವ ಈ ಕಥೆಯನ್ನು ಅವರ ಕಲ್ಪನೆಯಂತೆಯೇ ರೂಪಿಸಿದ್ದಕ್ಕೆ ಶಂಕರ್ ನಾಗ್ ಲೇಖಕರಿಂದ ಅಪಾರ ಪ್ರಶಂಸೆ ಪಡೆದಿದ್ದರು. ವಿಷ್ಣುವರ್ಧನ್, ಅನಂತ್ ನಾಗ್, ಗಿರೀಶ್ ಕಾರ್ನಾಡ್, ಮಾಸ್ಟರ್ ಮಂಜುನಾಥ್, ವೈಶಾಲಿ ಕಾಸರವಳ್ಳಿ, ಬಿ.ಜಯಶ್ರೀ, ಶಂಕರ್ ನಾಗ್, ಅರುಂಧತಿ ನಾಗ್ ಮುಂತಾದವರು ನಟಿಸಿದ್ದಾರೆ.

ಮಾಲ್ಗುಡಿ ಡೇಸ್ 39 ಕಂತುಗಳಲ್ಲಿ 1986ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಈ ಧಾರಾವಾಹಿಯ ಮಾಲ್ಗುಡಿಯನ್ನು ಶಂಕರ್ ನಾಗ್ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ರೂಪಿಸಿದ್ದರು. ಎಲ್.ವೈದ್ಯನಾಥನ್ ಸಂಗೀತ, ಆರ್.ಕೆ.ನಾರಾಯಣ್ ಅವರ ಸೋದರ ಆರ್.ಕೆ.ಲಕ್ಷ್ಮಣ್ ಅವರ ಚಿತ್ರಗಳು ಈ ಧಾರಾವಾಹಿಯ ಮಹತ್ವ ಹೆಚ್ಚಿಸಿವೆ. ಈ ಸರಣಿಯನ್ನು ಟಿ.ಎಸ್.ನರಸಿಂಹನ್ ನಿರ್ಮಾಣ ಮಾಡಿದ್ದರು.

ಈ ಧಾರಾವಾಹಿ ಸ್ವಾಮಿ ಅಂಡ್ ಫ್ರೆಂಡ್ಸ್, ಎ ಹಾರ್ಸ್ ಅಂಡ್ ಟು ಗೋಟ್ಸ್, ಅನ್ ಅಸ್ಟ್ರಾಲಜರ್ಸ್ ಡೇ ಮತ್ತಿತರೆ ಸಣ್ಣ ಕಥೆಗಳು ಹಾಗೂ ಸ್ವಾಮಿ ಅಂಡ್ ಫ್ರೆಂಡ್ಸ್ ಮತ್ತು ದಿ ವೆಂಡರ್ ಆಫ್ ಸ್ವೀಟ್ಸ್ ಕಾದಂಬರಿಯನ್ನು ಆಧರಿಸಿದೆ.

ಮಾಲ್ಗುಡಿಯ ಕರ್ತೃ ಆರ್.ಕೆ.ನಾರಾಯಣ್ ಚೆನ್ನೈನಲ್ಲಿ ಜನಿಸಿದರೂ ತಮ್ಮ ಬಹುತೇಕ ಜೀವನವನ್ನು ಮೈಸೂರಿನಲ್ಲಿ ಕಳೆದರು. ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮ ವಿಭೂಷಣ ಮತ್ತು ಪದ್ಮ ಭೂಷಣ ಪುರಸ್ಕಾರಗಳನ್ನು ಪಡೆದಿದ್ದರು. ರಾಯಲ್ ಸೊಸೈಟಿ ಆಫ್ ಲಿಟರೇಚರ್ ನೀಡುವ ಎಸಿ ಬೆನ್ಸನ್ ಮೆಡಲ್ ಗೌರವಕ್ಕೂ ಭಾಜನರಾಗಿದ್ದರು. ವಿಶ್ವ ಸಾಹಿತ್ಯದಲ್ಲಿ ಪ್ರಮುಖ ಭಾರತೀಯ ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. ಅವರ ಮಾಲ್ಗುಡಿ ಸಾಹಿತ್ಯಾಸಕ್ತರಿಗೆ ಕುತೂಹಲ ಕೆರಳಿಸುವ ತಾಣವಾಗಿದೆ. ಅವರು ಬರೆದಿದ್ದು ಶ್ರೀಸಾಮಾನ್ಯರ ಕಥೆಗಳಾಗಿದ್ದು ಅವು ಓದುಗರನ್ನು ಅಪಾರವಾಗಿ ಸೆಳೆದಿವೆ. ಮೇ 11 2020 ರಂದು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಇನ್ನೇಕೆ ತಡ ಮನೆಯಲ್ಲಿ ಮನೆ ಮಂದಿ ಜೊತೆ ಕುಳಿತು ಸಮಯ ಕಳೆಯುವ ಇದೇ ಹೊತ್ತಿನಲ್ಲಿ ಮತ್ತೊಮ್ಮೆ ನಿಮ್ಮ ನೆಚ್ಚಿನ ಜೀ಼ ಕನ್ನಡ ವಾಹಿನಿಯಲ್ಲಿ ‘ಮಾಲ್ಗುಡಿ ಡೇಸ್’ ನೋಡಿ ಕುಟುಂಬದ ಜೊತೆ ನೋಡಿ ಆನಂದಿಸಿ.

Be the first to comment

Leave a Reply

Your email address will not be published. Required fields are marked *

Translate »
error: Content is protected !!